NEWS DETAILS

Image Description

ಹಾವೇರಿ ಜಿಲ್ಲಾ ಪುರೋಹಿತರ ಪರಿಷತ್ತು ಮತ್ತು ಹಾವೇರಿ ಜಿಲ್ಲಾ ಬ್ರಾಹ್ಮಣ ಸಭಾದ ವತಿಯಿಂದ ಹಮ್ಮಿಕೊಂಡಿದ್ದ ಲಲಿತಾ ಸಹಸ್ರನಾಮ ಕುಂಕುಮಾರ್ಚನೆ ಕಾರ್ಯಕ್ರಮ

ದಿನಾಂಕ 09.10.2022ರ ಭಾನುವಾರ ಬೆಳಿಗ್ಗೆ ಹಾವೇರಿ ಜಿಲ್ಲಾ ಪುರೋಹಿತರ ಪರಿಷತ್ತು ಮತ್ತು ಹಾವೇರಿ ಜಿಲ್ಲಾ ಬ್ರಾಹ್ಮಣ ಸಭಾದ ವತಿಯಿಂದ ಹಮ್ಮಿಕೊಂಡಿದ್ದ ಲಲಿತಾ ಸಹಸ್ರನಾಮ ಕುಂಕುಮಾರ್ಚನೆ ಕಾರ್ಯಕ್ರಮ ಮತ್ತು ಮಧ್ಯಾಹ್ನ ಹಾವೇರಿ ಜಿಲ್ಲಾ ಬ್ರಾಹ್ಮಣ ಸಭಾ ಮತ್ತು ತಾಲ್ಲೂಕು ಬ್ರಾಹ್ಮಣ ಸಭಾದ ಆಶ್ರಯದಲ್ಲಿ ಮಹಾಸಭಾ ಅಧ್ಯಕ್ಷರಾದ ಶ್ರೀ ಅಶೋಕ ಹಾರನಹಳ್ಳಿ ಅವರ ಮಾರ್ಗದರ್ಶನದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸಂಘಟನಾ ಸಭೆಯು ನೆರವೇರಿತು.

ಈ ಸಭೆಯಲ್ಲಿ ಮಹಾಸಭಾ ಉಪಾಧ್ಯಕ್ಷರಾದ ಶ್ರೀ ಪ್ರಮೋದ್ ಮನೋಳಿ, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಬಿ.ಎಸ್. ರಾಘವೇಂದ್ರ ಭಟ್ಟರು ಮಹಾಸಭಾದ ಕಾರ್ಯವೈಖರಿಗಳನ್ನು ಮತ್ತು ಹಾವೇರಿ ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಪಡಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ರೀತಿಯಲ್ಲಿ ಚರ್ಚೆ ನಡೆಸಿದರು.

ಈ ಸಭೆಯಲ್ಲಿ ಹಾವೇರಿ ಜಿಲ್ಲಾ ಬ್ರಾಹ್ಮಣ ಸಭಾಧ್ಯಕ್ಷರಾದ ವಸಂತ ಮುಕ್ತಾಲಿ, ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾದ ಉಮೇಶ್ ಶಾಸ್ತ್ರಿ, ಉಮೇಶ್ ವಿಶ್ವರೂಪ, ಪ್ರಭಾಕರ ಮಂಗಳೂರ, ಶ್ರೀನಿವಾಸ ಶಿವಪೂಜಿ, ಹಾವೇರಿ ಜಿಲ್ಲಾ ಮಹಿಳಾ ಸಂಚಾಲಕಿ ಶ್ರೀಮತಿ ದೀಪಾ ನಾಗರಾಜ ಪಾಟೀಲ, ಎಲ್ಲಾ ತಾಲೂಕು ಪದಾಧಿಕಾರಿಗಳು ಹಾಗೂ ಇನ್ನಿತರ ಜಿಲ್ಲಾ ಬ್ರಾಹ್ಮಣ ಮುಖಂಡರು ಭಾಗವಹಿಸಿದ್ದರು.