NEWS DETAILS

Image Description

ಸರ್ಕಾರದಿಂದ ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವನ್ನು ಒದಗಿಸಲು ಸಹಕಾರ ನೀಡುವುದಾಗಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಸಚಿವರಾದ ಡಾ|| ಸಿ.ಎನ್. ಅಶ್ವಥ್ ನಾರಾಯಣ್ ಅವರು ಹೇಳಿದರು

ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಸಚಿವರಾದ ಡಾ|| ಸಿ.ಎನ್. ಅಶ್ವಥ್ ನಾರಾಯಣ್ ಅವರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಾದ ಶ್ರೀ ಅಶೋಕ್ ಹಾರನಹಳ್ಳಿ ಅವರು ಭೇಟಿಯಾಗಿ ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಮುಂದಿನ ಬಜೆಟ್ ನಲ್ಲಿ ಸರ್ಕಾರದಿಂದ ನೆರವನ್ನು ಕೋರಿದರು, ಸಚಿವರು ಈ ಸಂದರ್ಭದಲ್ಲಿ ಸರ್ಕಾರದಿಂದ ಸಮುದಾಯದ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವನ್ನು ಒದಗಿಸಲು ಸಹಕಾರ ನೀಡುವುದಾಗಿ ಹೇಳಿದರು ಹಾಗೂ ವೈಯಕ್ತಿಕವಾಗಿ ಸಹ ಸಮುದಾಯದ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ತಿಳಿಸಿದರು, ಸಚಿವರ ಭೇಟಿ ಸಂದರ್ಭದಲ್ಲಿ ಮಹಾಸಭಾದ ಉಪಾಧ್ಯಕ್ಷರಾದ ಡಿ.ವಿ. ರಾಜೇಂದ್ರ ಪ್ರಸಾದ್ ಹಾಗೂ ಹಾಸನದ ಕುಮಾರ್ ಉಪಸ್ಥಿತರಿದ್ದರು.

ವಂದನೆಗಳೊಂದಿಗೆ,
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ರಿ).