NEWS DETAILS

Image Description

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ನಡೆಯಲಿರುವ ಮಹಿಳಾ ಸಮಾವೇಶದ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಾದ ಶ್ರೀಮತಿ ನಿರ್ವಲಾ ಸೀತಾರಾಮನ್ ಅವರನ್ನು ಆಹ್ವಾನಿಸಲಾಯಿತು

2024 ಜನವರಿ 6 ಮತ್ತು 7ರಂದು  ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ನಡೆಯಲಿರುವ ಮಹಿಳಾ ಸಮಾವೇಶದ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಾದ ಶ್ರೀಮತಿ ನಿರ್ವಲಾ ಸೀತಾರಾಮನ್ ಅವರನ್ನು  ಆಹ್ವಾನಿಸಲಾಯಿತು.  ಮಹಿಳಾ ಸಮಾವೇಶದ ಉದ್ಘಾಟನಾ ಕಾರ್ಯಕ್ರಮಕ್ಕೆ ಬರುವುದಾಗಿ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರು ತಿಳಿಸಿದರು.  ಈ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರತಿಷ್ಠಾಪನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೆಡೆ ರಾಮ ಜಪ ಮತ್ತು ರಾಮ ತಾರಕ ಹೋಮವನ್ನು ಆಯೋಜನೆ ಮಾಡಿರುವುದನ್ನು ತಿಳಿದು ಸಂತೋಷ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರೊಡನೆ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣ್ ಹಿರಿಯಣ್ಣ ಮತ್ತು ಶ್ರೀಮತಿ ಶಕುಂತಲಾ ಅಯ್ಯರ್ ಅವರು ಉಪಸ್ಥಿತರಿದ್ದರು.